ರಾಜ್ಯ

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ

ಅಧಿಕಾರಿಗಳ ಸಭೆ ನಡೆಸದ ಸಚಿವರು…!

ಬೆಂಗಳೂರು : ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಆದರೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಅವರು ಬೆಂಗಳೂರಿನಿಂದಲೇ ವೀಡಿಯೋ ಕಾನ್ಪರೆನ್ಸ ಮೂಲಕ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಅದೇ ರೀತಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಆದರೆ ಸ್ಥಳ ಪರಿಶೀಲನೆ ನಡೆಸಿಲ್ಲ. ಅಲ್ಲದೆ, ಪ್ರವಾಹ ಆದರೆ ತಲೆ ಕೆಡಸಿಕೊಳ್ಳಲ್ಲ ಎಂದು ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ ಕೈತೊಳೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಜನ ಜೀವನ ಅತಂತ್ರವಾಗಿದೆ. ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದಿದ್ದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಚಿಕ್ಕಮಗಳೂರು ಉಸ್ತುವಾರಿ ಸಚಿವ  ಸಿ.ಟಿ. ರವಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟು, ನಾವು ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಉಢಾಪೆ ಉತ್ತರ ನಿಡಿದ್ದಾರೆ.

ಆದರೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅಧಿಕಾರಿಗಳ ಸಭೆ ಕೂಡ ನಡೆಸಿಲ್ಲ.

ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ಕರೋನಾ ಪಾಸಿಟಿವ್ ಆಗಿರುವುದರಿಂದ ಮೈಸೂರು ಜಿಲ್ಲೆಯ ವಸ್ತು ಸ್ಥಿತಿ ಅವಲೋಕಿಸಿಲ್ಲ.

ಸಿಎಂ ಯಡಿಯೂರಪ್ಪ ಕರೋನಾ ಪಾಸಿಟಿವ್ ಆಗಿದ್ದರೂ ಸದಾ ಚಟುವಟಿಕೆಯಿಂದ ಇದ್ದು ಅಲ್ಲಿಂದಲೇಜಿಲ್ಲಾಧಿಕಾರಿಗಳ ಜೊತೆಗೆ ಸಂಪರ್ಕ ಸಾಧಿಸಿ ಮಾಹಿತಿ ಪಡೆದಿದ್ದಾರೆ. ಮಳೆ ಅವಲೋಕನ ನಡೆಸಿದ್ದಾರೆ.

ನೇರವಾಗಿ ಸಚಿವರಿಗೆ ಕರೆ ಮಾಡಿ ಸ್ಥಳ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರೂ ಜಿಲ್ಲಾ ಉಸ್ತುವಾರಿಗಳು ಕ್ಯಾರೆ ಎನ್ನುತ್ತಿಲ್ಲ ಸಚಿವ ಸಂಪುಟವಿದ್ದರೂ ಸಚಿವರು ಪರಿಸ್ಥಿತಿ ಅವಲೋಕಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *