ಅಂತಾರಾಷ್ಟ್ರೀಯ

ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸೂಕ್ತವಲ್ಲ

ಬೆಳಗಾವಿ ಪ್ರಜಾಕಿರಣ.ಕಾಮ್ ಡಿ. 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ರಾಮದುರ್ಗದ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿಸೆಂಬರ್ 06 ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನ ಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು.

*ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳಲಿ*
ಕನ್ನಡ ಕುಲಬಾಂಧವರಿರುವ ಜತ್ ತಾಲ್ಲೂಕಿನವರು ಹಲವಾರು ವರ್ಷಗಳಿಂದ ನೀರಿಲ್ಲದೆ ಬಳಲುತ್ತಿದ್ದರು.

ಅಂತಹುದರಲ್ಲಿ ಮಹಾರಾಷ್ಟ್ರ ನೀರಿನ ಯೋಜನೆ ರೂಪಿಸಿದೆ ಎಂದಿದ್ದಾರೆ. ಆ ಯೋಜನೆ ಸಾಕಾರಗೊಳ್ಳಲಿ. ಆ ಭಾಗದ ಜನರಿಗೆ ನೀರು ತಲುಪುವ ಕೆಲಸವಾಗಲಿ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *