ಧಾರವಾಡ prajakiran.com : ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಭಿಕ್ಷೆ ಬೇಡುತ್ತಿದ್ದ ಬಾಲಕಿಯನ್ನು ತಿಂಡಿ, ತಿನಿಸು ಆಸೆ ತೋರಿಸಿ ಹಾಗೂ ಹಣದ ಆಮಿಷವೊಡ್ಡಿ
ಯುವಕನೊಬ್ಬ ಈ ದುಷ್ಕೃತ್ಯ ಎಸಗಿರುವುದು ಗೊತ್ತಾಗಿದೆ.
ಈ ಕುರಿತು ಧಾರವಾಡ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣಾ ಘಟಕಕ್ಕೆ ಹಾಗೂ ಮಕ್ಕಳ ಸಹಾಯವಾಣಿಗೆ ಕರೆ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮಾಹಿತಿ ಸಂಗ್ರಹಿಸಿದ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯ ಬಳಿ ಆಪ್ತ ಸಮಾಲೋಚನೆ ನಡೆಸಿದಾಗ ಈ ಘಟನೆ ನಡೆದಿರುವುದು ದೃಢಪಟ್ಟಿದೆ.
ಬಳಿಕ ಆ ಬಾಲಕಿಯನ್ನು ಮಕ್ಕಳ ತಂಗುದಾಣಕ್ಕೆ ಸ್ಥಳಾಂತರ ಮಾಡಲಾಗಿದೆ.
ಈ ಕುರಿತು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಧಾರವಾಡ ಉಪನಗರ ಠಾಣೆಯ ಪೊಲೀಸರು ಆ ಕಿರಾತಕ ಯುವಕನ ಪತ್ತೆ ಹಚ್ಚಿ, ಹೆಡೆಮುರಿ ಕಟ್ಟುತ್ತಾರೆಯೇ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕಿದೆ.