ಧಾರವಾಡ prajakiran.com : ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ, ಕಿರಾತಕನೊಬ್ಬ ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
ಇದರಿಂದಾಗಿ ಮನನೋಂದ ಬಾಲಕಿ ಕೀಟನಾಟಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಮಠಕ್ಕೆ ಪೂಜೆಗೆಂದು ತೆರಳಿದಾಗ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈ ಹಿನ್ನಲೆಯಲ್ಲಿ ಹೆದರಿದ ಬಾಲಕಿ ತಾಯಿಗೆ ಈ ವಿಷಯ ತಿಳಿಸಿ, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಕಿತ್ತೂರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಆದರೆ ಅವರು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾಳೆ.
ಪ್ರಕರಣದ ವಿವರ : ಈ ಘಟನೆ ಜು. 30 ರಂದು ಗುರುವಾರ ನಡೆದಿದ್ದು, 8 ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ.
ಆರೋಪಿಯನ್ನು ಸಿಂಗನಹಳ್ಳಿಯ 24 ವರ್ಷದ ಬಸೀರ್ ಮಾಬುಸಾಬ ಗಡಾದವರ ಎಂದು ಗುರುತಿಸಲಾಗಿದೆ. ಈ ಯುವಕ ಆಕೆಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ಆನಂತರ ಪರಾರಿಯಾಗಿದ್ದಾನೆ.
ಮರುದಿನ ಆಕೆ ತನ್ನ ತಾಯಿಯ ಮುಂದೆ ಅಳಲನ್ನು ತೋಡಿಕೊಂಡಿ ಆತ್ಮಹತ್ಯೆಯ ದಾರಿ ತುಳಿದಿದ್ದಾಳೆ.
ಇದರಿಂದ ನೋಂದ ಪಾಲಕರು ನಮಗೆ ನ್ಯಾಯ ಬೇಕು ಎಂದು ಧಾರವಾಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಅನ್ವಯ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲೀಸರು ಆರೋಪಿ ಬಸೀರ್ ಮಾಬುಸಾಬ ಗಡಾದವರ ಬಂಧನಕ್ಕೆ ವ್ಯಾಪಕ ಜಾಲ ಬೀಸಿದ್ದಾರೆ ಎಂದು ತಿಳಿದುಬಂದಿದೆ.