ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಮೆಣಸಿನಕಾಯಿ ವ್ಯಾಪಾರಿ ಕೋವಿಡ್ ನಿಂದ ಗುಣಮುಖರಾಗಿ ಬುಧವಾರ ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರದಿಂದಾಗಿ , ಮೇ ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಧಾರವಾಡ ಹೊಸಯಲ್ಲಾಪುರದ ಕೋಳಿಕೆರೆ, ನವಲೂರ ಅಗಸಿ ಪ್ರದೇಶದ ಪಿ- 705 ( 35 ವರ್ಷ,ಪುರುಷ) ಸಂಪೂರ್ಣ ಗುಣಮುಖರಾಗಿದ್ದಾರೆ.
ಇವರಿಗೆ 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ.
ಅಲ್ಲದೆ, ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಮೆಣಸಿನಕಾಯಿ ವ್ಯಾಪಾರಿಯಾಗಿದ್ದ ಈತ ತನ್ನ ಆರೋಗ್ಯ ಹದಗೆಟ್ಟ ಪರಿಣಾಮ ಧಾರವಾಡದ ಸ್ಪಂದನಾ ಹಾಗೂ ಶ್ರಾವ್ಯಾ ಆಸ್ಪತ್ರೆಗೆ ಭೇಟಿ ನೀಡಿದ್ದ.
ಆನಂತರ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಾಗಿ, ಅಲ್ಲಿಂದ ಹುಬ್ಭಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ.
ಇತನಿಗೆ ಹೊಟ್ಟೆ ನೋವು ಇದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯರು, ನರ್ಸ್ ಹೋಮ್ ಕ್ವಾರಂಟೆನ್ ಗೆ ಒಳಪಟಿದ್ದರು.
ಇದಲ್ಲದೆ, ಈತ ಎಪಿಎಂಸಿ ಸೇರಿ ಹಲವು ಓಣಿಗಳಲ್ಲಿ ಸಂಚರಿಸಿದ್ದರಿಂದ ಧಾರವಾಡ ಜನತೆ ಬೆಚ್ಚಿಬಿದ್ದಿದ್ದರು. ಇದೀಗ ಆತ ಗುಣಮುಖನಾಗಿರುವುದು ಖುಷಿಯ ಸಂಗತಿಯಾಗಿದೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ 11 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.