ಅಂತಾರಾಷ್ಟ್ರೀಯ

ರಾಜ್ಯದ ನಾಲ್ಕು ಪದವೀಧರ, ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನ.೧೦ಕ್ಕೆ ಮುಂದೂಡಿದ ಚುನಾವಣಾ ಆಯೋಗ

ನವದೆಹಲಿ Prajakiran.com : ರಾಜ್ಯದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ಮೇಲೆ ರಾಜ್ಯದ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ.

ಇದರಿಂದಾಗಿ ಈ ಹಿಂದೆ ನವೆಂಬರ್ 2ರಂದು ನಡೆಯಬೇಕಿದ್ದ ಮತ ಎಣಿಕೆಯನ್ನು ಇದೀಗ
ನ. 10ಕ್ಕೆ ಮುಂದೂಡಿದಂತಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಅ‌.28ರಂದು ನಡೆದ ನಾಲ್ಕು ವಿಧಾನಪರಿಷತ್ ಮತಕ್ಷೇತ್ರಗಳ ಮತದಾನದ ಮತ ಎಣಿಕೆ  ಪ್ರಕ್ರಿಯೆ ಈಗ ನವೆಂಬರ್ 2ರ ಬದಲಾಗಿ, ನವೆಂಬರ್ 10ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಇದು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಅದರಲ್ಲೂ ವಿಶೇಷವಾಗಿ ಅಖಾಡಕ್ಕೆ ಇಳಿದಿದ್ದ ಅಭ್ಯರ್ಥಿಗಳು ಮತ್ತೆ ಎಂಟು ದಿನಗಳ ಕಾಲ ಮತ ಎಣಿಕೆಗೆ ಕಾಯಬೇಕಾಗಿದೆ.
ಮೊದಲೇ ಡವ ಡವ ಎನ್ನುತ್ತಿದ್ದ ಎದೆ ಬಡಿತ ಮತ್ತಷ್ಟು ಎರಳಿತವಾಗಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *