ಧಾರವಾಡ prajakiran.com ನ.24: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಧಾರವಾಡ ಮತಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಕಾರ್ಯ ಬುಧವಾರ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು.
ನಾಮಪತ್ರ ಸಲ್ಲಿಸಿದ್ದ 12 ಅಭ್ಯರ್ಥಿಗಳ ಪೈಕಿ
ಪಕ್ಷೇತರ ಅಭ್ಯರ್ಥಿ ನಾಗೇಶಪ್ಪ ಶಿವರುದ್ರಪ್ಪ ಪಡೆಪ್ಪನವರ ಅವರು ಪ್ರಮಾಣಪತ್ರದ ( ಅಫಿವಿಡಿಯಟ್) ಎಲ್ಲ ಕಾಲಂ ಗಳನ್ನು ಭರ್ತಿ ಮಾಡದೇ ಇರುವದರಿಂದ ಅವರ ನಾಮಪತ್ರ ತಿರಸ್ಕೃತವಾಗಿದೆ.
ಅಂತಿಮವಾಗಿ 11 ಜನ ಉಮೇದುವಾರರ ಉಮೇದುವಾರಿಕೆ ಸ್ವೀಕೃತವಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆ ವ್ಯಾಪ್ತಿಯ ಎರಡು ಸ್ಥಾನಗಳಿಗೆ ಪೈಪೋಟಿ ಎರ್ಪಟ್ಟಿದ್ದು, ಕಾಂಗ್ರೆಸ್ ನ ಸಲೀಂ ಅಹ್ಮದ ಬಿಜೆಪಿಯ ಪ್ರದೀಪ ಶೆಟ್ಟರ್ ಜಯಭೇರಿ ಬಾರಿಸುವುದು ಖಚಿತ ಎನ್ನಲಾಗುತ್ತಿದೆ.
ಇನ್ನೋಬ್ಬ ಅಭ್ಯರ್ಥಿ ಎರಡು ರಾಷ್ಟ್ರೀಯ ಪಕ್ಷದಿಂದ ಕಣಕ್ಕೆ ಇಳಿಯದಿರುವುದು ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕುತೂಹಲ ಕೆರಳಿಸಿದೆ