ರಾಜ್ಯ

ಬಿಜೆಪಿಯ ಎಸ್.ವಿ ಸಂಕನೂರ ಎರಡನೇ ಬಾರಿ ಜಯಭೇರಿ  

ಧಾರವಾಡ prajakiran.com : ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರಅವರು ಎರಡನೇ ಬಾರಿಗೆ ವಿಧಾನಪರಿಷತ್ ಪ್ರವೇಶಿಸಿದ್ದಾರೆ.

ಅ. 28ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 52041 ಮತಗಳು ಚಲಾವಣೆಗೊಂಡಿದ್ದವು.  43269- ಮತಗಳು ಸಿಂಧುಗೊಂಡಿದ್ದರೆ,  8772-  ಮತಗಳು ಅಸಿಂಧುಗೊಂಡಿವೆ.

ಬಿಜೆಪಿಯಅಭ್ಯರ್ಥಿ ಎಸ್.ವಿ ಸಂಕನೂರು – 23857 ಮತಗಳನ್ನು ಪಡೆದು ವಿಜಯ ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಎಂ. ಕುಬೇರಪ್ಪಅವರು – 12448 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಪಕ್ಷೇತರಅಭ್ಯರ್ಥಿಯಾದ ಬಸವರಾಜ ಗುರಿಕಾರಅವರು ಕೇವಲ 6188 ಮತಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ  ವಿಜೇತ ಅಭ್ಯರ್ಥಿ ಎಸ್.ವಿ.ಸಂಕನೂರ ಅವರಿಗೆ ಚುನಾವಣಾ ವೀಕ್ಷಕರಾಗಿರುವ , ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಮಾಣ ಪತ್ರ ನೀಡಿದರು.

ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್,ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು, ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶಕುಮಾರ್ ಮತ್ತಿತರರು ಉಪಸ್ಥಿತರಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *