ಬೆಂಗಳೂರು prajakiran.com : ಕರೋನಾದಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಣೆ ಮಾಡಿದರು.
ಸಂಜೆ 4:30ಕ್ಕೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂ ಗೆ ಕರೆ ಬಂದಿತ್ತು.
ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ ಪ್ರಧಾನಿ ಮೋದಿ ಅವರು ಸುಮಾರು ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ತಮಗೆ ಕೋವಿಡ್ ತಗುಲಿರುವ ಬಗ್ಗೆ ವಿವರಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ವಿವರಣೆ ನೀಡಿದರು.
ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದರು.
ಅಲ್ಲದೆ, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಸಿಎಂ ಮಾಹಿತಿ ನೀಡಿದರು.
ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ
ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ
ಲಸಿಕೆ ಅಭಿಯಾನವನ್ನು ತೀವ್ರಗೊಳಿ ಸಲಾಗಿದೆ
ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿವರಣೆ ನೀಡಿದರು.