ಜಿಲ್ಲೆಯಲ್ಲಿ ಇಂದು 220 ಜನ ಗುಣಮುಖರಾಗಿ ಬಿಡುಗಡೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದೆ.
ಸೋಂಕಿತರ ಸಂಖ್ಯೆ ಸೋಮವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ.
ಇಂದು ಮತ್ತೆ 103 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 10 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 5,
ಲೈಪ್ ಲೈನ್ 1, ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ 1, ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ 2 ಹಾಗೂ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 453 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1668 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಸೋಂಕಿತರು 220 ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.