ಅಪರಾಧ

ಕೃಷ್ಣಾನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ…..!

ವಿಜಯಪುರ prajakiran.com :  ಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಅಸ್ವಸ್ಥ ಮಗಳೊಂದಿಗೆ ತಾಯಿಕೂಡ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂಕಿ ಜಾಕ್ ವೆಲ್ ನಲ್ಲಿ ಭಾನುವಾರ ಈ ರ್ದುಘಟನೆ ನಡೆದಿದೆ

ಮೃತರನ್ನು ಶಕುಂತಲಾ ಖೇಡ್ ( 50) ಹಾಗೂ ಗಂಗಾ ( 22 ) ಎಂದು ಗುರುತಿಸಲಾಗಿದೆ.

ಶಕುಂತಲಾ ಅವರ ಪತಿ ಸಿದ್ದಣ್ಣ ಖೇಡ್ ಕಳೆದ ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದರು.

ಇದರಿಂದ ತೀವ್ರವಾಗಿ ನೊಂದಿದ್ದ ಶಕುಂತಲಾ ಅವರು ದಿಕ್ಕು ತೋಚದೆ ಕಂಗಲಾಗಿದಲ್ಲದೆ, ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಅಸ್ವಸ್ಥ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *