ಅಪರಾಧ

ಧಾರವಾಡದ ಮುಗದ ಕೆರೆಯಲ್ಲಿ ಈಜು ಬಾರದೆ ಅಳಿಯ-ಮಾವ ದಾರುಣ ಸಾವು

ಧಾರವಾಡ prajakiran.com : ಕೆರೆಯಲ್ಲಿ ಈಜಲೆಂದು ಹೋಗಿ ಈಜು ಬರದೇ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋದ ಅಳಿಯ ಹಾಗೂ ಮಾವ ದಾರುಣವಾಗಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಮುಗದ ಗ್ರಾಮದ ಕೆರೆಯಲ್ಲಿ ನಡೆದಿದೆ.

ಅಳಿಯ ಕರೆಪ್ಪ ಎಂಬಾತ ಕೆರೆಯಲ್ಲಿ ಈಜಲು ಹೋಗಿದ್ದ. ಈತನಿಗೆ ಈಜು ಬರದೇ ಮುಳುಗುತ್ತಿದುದನ್ನು ಕಂಡು ಆತನ ರಕ್ಷಣೆಗೆ ಮಾವ ವಿಠ್ಠಲ ಕುರುಬರ ಧಾವಿಸಿದ್ದಾನೆ.

ಆದರೆ, ಇಬ್ಬರಿಗೂ ಈಜು ಬರದೇ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಮುಗದ ಗ್ರಾಮದಲ್ಲಿ ಬೀರಲಿಂಗೇಶ್ವರ ಮೂರ್ತಿ ಸ್ಥಾಪನೆ ಕಾರ್ಯಕ್ರಮಕ್ಕೆ ಮಾವ ವಿಠ್ಠಲ ಅವರು ಮುಗದ ಗ್ರಾಮಕ್ಕೆ ಬಂದಿದ್ದರು.

ಆದರೆ, ಅಳಿಯನನ್ನು ರಕ್ಷಿಸಲು ಹೋಗಿ ತಾನೂ ಸಾವನ್ನಪ್ಪಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

ಅಳಿಯ ಹಾಗೂ ಮಾವನನ್ನು ಕಳೆದುಕೊಂಡ ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *