ಧಾರವಾಡ prajakiran.com : ಧಾರವಾಡದಲ್ಲಿ ಹಾಡಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಧಾರವಾಡದಲ್ಲಿ ಬುಧವಾರ ಸಂಜೆ ಮೆಹಬೂಬ್ ನಗರದಲ್ಲಿ ಹಣಕಾಸಿನ ವ್ಯವಹಾರಕ್ಕಾಗಿ ಈ ಮಾರಣಾಂತಿಕ ಹಲ್ಲೆ ನಡೆದಿತ್ತು.
ಇದರಿಂದಾಗಿ ಧಾರವಾಡದ ಮೆಹಬೂಬ್ ನಗರ ನಿವಾಸಿ ಹಾಗೂ ಆಟೋ ಡ್ರೈವರ್ ಮಾಬುಲಿ ಹಿರೇಕುಂಬಿ ಎಂಬಾತ ಮಾರಣಾಂತಿಕವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಮಾಡಿದ ಮುಕ್ತುಂ ನನ್ನು ಬಂಧಿಸಲಾಗಿದೆ. ಹಣಕಾಸಿನ ವ್ಯವಹಾರದಿಂದ ಬೇಸತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಪ್ರಮೋದ ಯಲಿಗಾರ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.
ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ವಿವರಿಸಿದ್ದಾರೆ.