ರಾಜ್ಯ

ಹಾಸನದ ಹಿರಿಯ ಪತ್ರಕರ್ತ ಮುರುಳಿ ನಿಧನ

ಹಾಸನದ ಹಿರಿಯ ಪತ್ರಕರ್ತ ಮುರುಳಿ ನಿಧನ

ಹಾಸನ ಪ್ರಜಾಕಿರಣ.ಕಾಮ್ : 
ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ(55) ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ
ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತೆ ಲೀಲಾವತಿ ಅವರ ಪುತ್ರನಾಗಿದ್ದ ಮುರುಳಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಯಾಗಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸ್ನೇಹಜೀವಿ ಮುರುಳಿ,
ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಮುರುಳಿ ಅವರ ಅಂತ್ಯಕ್ರಿಯೆ ಹಾಸನದ ಬಿಟ್ಟಗೋಡನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತ ಮುರುಳಿ
ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸ್ನೇಹ ಜೀವಿಯಾಗಿದ್ದ ಪತ್ರಕರ್ತ ಮುರುಳಿ ಸಂಘಟಕನಾಗಿಯೂ ಗಮನ ಸೆಳೆದಿದ್ದರು. ಅವರ ಸಾವಿನ ಸುದ್ದಿ ಅರಗಿಸಿಕೊಳ್ಳಲಾರದ ಸಂಗತಿ ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.

ಮುರುಳಿ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *