ಅಪರಾಧ

ಗಂಡ ಹೆಂಡತಿ ಜಗಳ: ನ್ಯಾಯ ಹೇಳಲು ಹೋದ ತಾಂಡಾದ ಮುಖಂಡನ ಕೊಲೆ…!

ಗದಗ prajakiran.com : ಗಂಡ ಹೆಂಡತಿ ಮದ್ಯದ ಜಗಳ ನ್ಯಾಯ ಹೇಳಲು ಹೋದ ತಾಂಡಾದ ಮುಖಂಡನ ಕೊಲೆಯಲ್ಲಿ ಅಂತ್ಯಗೊಂಡಿರುವ ಧಾರುಣ ಘಟನೆ ಶುಕ್ರವಾರ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

ಹೌದು, ರಾಜೀ ಪಂಚಾಯತಿ ಮಾಡಿ ನನಗೆ ನ್ಯಾಯ ಒದಗಿಸಿ ಕೊಡಲಿಲ್ಲವೆಂದು ಕೋಪಗೊಂಡ ವಿಷ್ಣು ರೂಪಲಪ್ಪ ಪವಾರ(35) ಎಂಬ ವ್ಯಕ್ತಿ ಗಂಡ ಹೆಂಡತಿ ನಡುವಿನ ಜಗಳ ಬಗೆಹರಿಸಲು ಮಧ್ಯಸ್ಥಿತಿಕೆ ವಹಿಸಿದ್ದ ತಾಂಡಾದ ಮುಖಂಡನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ.

ಅತ್ತಿಕಟ್ಟಿ ತಾಂಡಾದ ಸೋಮಲಪ್ಪ ನಾಯರ್(50) ಎಂಬ ವ್ಯಕ್ತಿಯ ದಾರುಣವಾಗಿ ಕೊಲೆಗೀಡಾದ ಮುಖಂಡ.

ಹೊಟ್ಟೆ ಎದೆ ಹಾಗೂ ಗಂಟಲು ಭಾಗಕ್ಕೆ ಬಲವಾಗಿ ಚಾಕು ಇರಿದ ಪರಿಣಾಮ ಸೋಮಲಪ್ಪ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದು, ವಿಷ್ಣು ಸ್ವತಃ ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.

ಘಟನೆ ವಿವರ:

ಕಳೆದ ನಾಲ್ಮದು ವರ್ಷಗಳಿಂದ ವಿಷ್ಣು ಪವಾರ ಮತ್ತು ಆತನ ಹೆಂಡತಿ ಸುಮಿತ್ರಾ ಇಬ್ಬರು ಮಧ್ಯೆ ಜಗಳ ಬಂದಿತ್ತು.

ವಿಷ್ಣು ತನ್ನ ಹೆಂಡತಿಯ ಮೇಲೆ ಸಂಶಯ ಮಾಡುತ್ತಿದ್ದ. ಸಂಶಯ ಸಂಸಾರ ಹಾಳು ಮಾಡಿತು ಎಂಬಂತೆ ಪತಿಯ ಈ ನಡೆಯಿಂದ ಬೇಸತ್ತಿದ್ದ ಸುಮಿತ್ರಾ ತಾಂಡಾ ಬಿಟ್ಟು ಹೋಗಿದ್ದಳು.

 ಮಕ್ಕಳ ತುಂಬು ಸಂಸಾರ ಬಿಟ್ಟು ಸುಮಿತ್ರಾ ಅವರು ಮನೆಯಲ್ಲೇ ಇದ್ದಳಂತೆ.

ಇನ್ನು ರಾಜೀ ಪಂಚಾಯತಿ ಮಾಡಿ ಗಂಡ ಹೆಂಡತಿಯನ್ನು ಒಂದು ಮಾಡಲು ತಾಂಡಾದ ಮುಖಂಡರು ಮುಂದಾಗಿದ್ದರು,

ಆದರೆ, ಸುಮಿತ್ರಾ ಊರ ಜನರ ಮಾತು ಕೇಳದೆ ತವರು ಮನೆಯಲ್ಲೇ ಉಳಿದಿದ್ದಳು. ಇದರಿಂದ ತಾಂಡಾದ ಮುಖಂಡರು ಸರಿಯಾಗಿ ರಾಜೀ ಪಂಚಾಯತಿ ಮಾಡಿಲ್ಲವೆಂದು ವಿಷ್ಣು ಸಿಟ್ಟು ಮಾಡಿಕೊಂಡಿದ್ದ.

ನಿನ್ನೆ (ಶುಕ್ರವಾರ) ಗ್ರಾಮದ ನೇವಲಾಬ್ ಉತ್ಸವದ ಕುರಿತು ಚರ್ಚಿಸಲು ಕಾರುಬಾರಿ, ನಾಯಕರುಗಳು ಸಭೆ ಸೇರಿದ್ದರು.

ಈ ವೇಳೆ ಏಕಾಏಕಿ ಗಲಾಟೆ ಎಬ್ಬಿಸಿದ ವಿಷ್ಣು ಚಾಕು ಇರಿದು ಕೊಲೆಗೈದಿದ್ದಾನೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *