ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಸಂಚಾರಿ ಕುರಿಗಾರ ಮಹಿಳೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಲಕ್ಷ್ಮಿ ವಿಠ್ಠಲ್ ಕಳ್ಳಿಮನಿ ಎಂಬ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಕೇವಲ 24 ಗಂಟೆಯೊಳಗಾಗಿ ಕೊಲೆ ಆರೋಪಿ ಬಂಧನ ಮಾಡಲಾಗಿದೆ ಎಂದು ಹೇಳಿದರು.
ದರೋಡೆ ಉದ್ದೇಶದಿಂದ ಮಹಿಳೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ
ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಬಂಧಿತ ಆರೋಪಿ ಎಂದು ವಿವರಿಸಿದರು.
ಉರುವಲು ಕಟ್ಟಿಗೆ ತರಲು ಹೋಗಿದ್ದ ಲಕ್ಷ್ಮೀ ಕಳ್ಳಿಮನಿ ಎಂಬ ಮಹಿಳೆಯನ್ನ ಹಾಡಹಗಲೇ ಕೊಲೆ ಮಾಡಿದ್ದ ಎಂದರು.
ಕೊಲೆ ಮಾಡಿ ಮಹಿಳೆಯ ಮೈಮೇಲಿನ ಬಂಗಾರದ ಆಭರಣಗಳನ್ನ ದೋಚಿ ಪರಾರಿಯಾಗಿದ್ದ ಆರೋಪಿ ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು.