ರಾಜ್ಯ

ಮುಸ್ಲಿಂ ಮೀಸಲಾತಿ ರದ್ದು ಖಂಡಿಸಿ ಮಸೀದಿಗಳಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ

ಧಾರವಾಡ ಪ್ರಜಾಕಿರಣ. ಕಾಮ್ : ರಾಜ್ಯದ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯದ ಮೀಸಲಾತಿ ರದ್ದುಪಡಿಸಿರುವುದಕ್ಕೆ ರಾಜ್ಯದೆಲ್ಲಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇದಕ್ಕೆ ಸಿಎಂ ತವರು ಜಿಲ್ಲೆ ಧಾರವಾಡದಲ್ಲೂ ಭಾರೀ ಪ್ರಮಾಣದ ಬೆಂಬಲ ದೊರೆತಿದೆ.

ಈ‌ ಮೀಸಲಾತಿ ರದ್ದಾಗಿರುವುದರಿಂದ
ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಘೋರ ಅನ್ಯಾವಾಗಲಿದೆ

ಬಡ ಮುಸ್ಲಿಂ ಮಕ್ಕಳಿಗೆ ಶೈಕ್ಷಣಿಕ ವಾಗಿ ಸಿಗಬೇಕಾದ ಸೌಲಭ್ಯಗಳು ವಂಚಿತವಾಗಲಿದೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಕಿಡಿಕಾರಿದರು.

ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯ ಕರೆಯ ಮೇರೆಗೆ ಶುಕ್ರವಾರ ಮಸೀದಿಗೆ ನಮಾಜ್ ಮಾಡಲು ಕಪ್ಪು ಪಟ್ಟಿ ಧರಿಸಿ ಆಗಮಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಧಾರವಾಡದ ಎಲ್ಲಾ ಮಸೀದಿಗಳಲ್ಲಿ ಸಾವಿರಾರು ಮುಸ್ಲಿಂ ಸಮುದಾಯದ ಜನ ಈ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದ ದೃಶ್ಯ ಕಂಡು ಬಂದಿತ್ತು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *