ಧಾರವಾಡ prajakiran.com :
ಧಾರವಾಡ ಜಿಲ್ಲೆಯ ಜಿಪಂ ಸದಸ್ಯ
ಯೋಗೀಶ್ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಹತ್ಯೆಗೂ ಸಂಚು ರೂಪಿಸಿದ್ದ ಮಾಹಿತಿ ಸಿಬಿಐ ತನಿಖೆ ವೇಳೆ ಬಯಲಿಗೆ ಬಂದಿದೆ.
ಚಂದೂ ಮಾಮ ಅಲಿಯಾಸ್ ಚಂದ್ರಶೇಖರ ಇಂಡಿ ವಶಕ್ಕೆ ಪಡೆದಿದ್ದ ಸಿಬಿಐ ಎದುರು ಈ ರೋಚಕ ಸತ್ಯ ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.
ಪ್ರಕರಣದ ಸಿಬಿಐ ತನಿಖೆ ಆರಂಭವಾಗುತ್ತಿದ್ದಂತೆ ಈ ಸಂಚು ರೂಪಿಸಲಾಗಿತ್ತು. ವಿಜಯಪುರ ಜಿಲ್ಲೆಯ ಹುಡುಗರು ಒಮ್ಮೆ ಬಂದು ಹೋಗಿದ್ದರು.
ಇನ್ನೊಮ್ಮೆ ಧಾರವಾಡ ಹಳಿಯಾಳ ರಸ್ತೆ ಬಳಿ ಬೆನ್ಬಟ್ಟಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ಹೊರಬರುತ್ತಿದ್ದಂತೆ,
ಸಿಬಿಐ ವಿಚಾರಣೆ ಮುಗಿಸಿ ಹೊರಬಂದ ಬಸವರಾಜ ಮುತ್ತಗಿ
ತನ್ನ ಕೊಲೆಗೆ ಸ್ಕೆಚ್ ಹಾಕಿದ್ದ ವಿಚಾರ
ಸುದ್ದಿ ಸುಳ್ಳಾಗಲಿ ಅಂತಾ ದೇವರಲ್ಲಿ ಪ್ರಾರ್ಥಿಸುತ್ತೇನೆ.
ನಮ್ಮ
ಭಾವನೆಗಳ ಜೊತೆ ಯಾರೊಬ್ಬರೂ ಆಟವಾಡಬಾರದು.
ನಿಮ್ಮ ಜೊತೆ ನಾವು ಭಾವನೆಗಳೊಂದಿಗೆ ಬದುಕಿದ್ದೆವು.
ಆ ಭಾವನೆಗಳಿಗೆ ದ್ರೋಹ ಮಾಡಬೇಡಿ.
ನಂಬಿಕೆಗೆ ದ್ರೋಹ ಮಾಡಬೇಡಿ. ಸದ್ಯ ಪ್ರಕರಣ
ಇನ್ನೂ ವಿಚಾರಣೆ ನಡೆಯುತ್ತಿದೆ.
ಅದರಲ್ಲಿ ಇನ್ನೂ ಅನೇಕ ಅಂಶಗಳಿವೆ
ಎಲ್ಲವನ್ನೂ ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ.
ಮತ್ತೆ ವಿಚಾರಣೆಗೆ ಮರಳಿ ಬರುತ್ತೇನೆ ಎಂದು
ಬಸವರಾಜ ಮುತ್ತಗಿ ಹೇಳಿಕೆ ನೀಡಿದರು.
ಈ ಹಿಂದೆ ಪ್ರಕರಣಕ್ಕೆ ಕಾನೂನು ನೆರವು ನೀಡಿ, ಅವರ ಕುಟುಂಬದ ಪರವಾಗಿ ಧ್ವನಿ ಎತ್ತಿದ್ದ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ, ಯೋಗೀಶಗೌಡ ಗೌಡರ ಸಹೋದರ ಗುರುನಾಥ ಗೌಡರ ಹತ್ಯೆಗೂ ಸಂಚು ರೂಪಿಸಿದ ಮಾಹಿತಿ ಹೊರಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.