ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ ಗರಗ ಖಾದಿ ಗ್ರಾಮೋದ್ಯೋಗದ ಸಂಘದ ಮಾಜಿ ಅಧ್ಯಕ್ಷ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಯ
ಬಿಜೆಪಿ ಉಪಾಧ್ಯಕ್ಷ
ನಾಗಪ್ಪ ತಿರ್ಲಾಪುರ ಅವರು ಸೋಮವಾರ ವಿಧಿವಶರಾದರು.
ಅವರು ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು.
ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗಿನ ಜಾವ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಅವರ ಅಗಲಿಕೆಯಿಂದ ಖಾದಿ ಗ್ರಾಮೋದ್ಯೋಗ ಕ್ಷೇತ್ರಕ್ಕೆ ಹಾಗೂ ಬಿಜೆಪಿಗೆ ಗ್ರಾಮೀಣ ಭಾಗದಲ್ಲಿ ತುಂಬಲಾರದ ಹಾನಿಯಾಗಿದೆ.
ಮೃತರ ಅಂತ್ಯಕ್ರಿಯೆ ಧಾರವಾಡ ತಾಲೂಕಿನ ಹೆಬ್ಬಳ್ಳಿಯ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.