hanumanthgouda munenkoppa no more
ರಾಜ್ಯ

ನವಲಗುಂದ ಶಾಸಕ ಮುನೇನಕೊಪ್ಪ ಸಹೋದರ ಹನುಮಂತಗೌಡ ವಿಧಿವಶ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ಮೂಲ  ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ  ಆದ  ಶಂಕರ ಪಾಟೀಲ ಮುನೇನಕೊಪ್ಪಅವರ ಹಿರಿಯ ಸಹೋದರ ಹಾಗೂ ಪ್ರಗತಿಪರ ರೈತ ಹನುಮಂತಗೌಡ ಬ ಪಾಟೀಲ ಮುನೇನಕೊಪ್ಪ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆ.

ಅವರು ಸೋಮವಾರ ಬೆಳಗಿನ ಜಾವ ಅಮರಗೋಳ ದ ಸ್ವಗೃಹದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ದಿವಂಗತ ಹನುಮಂತಗೌಡ ಬ ಪಾಟೀಲ ಮುನೇನಕೊಪ್ಪ ಅವರ ಅಂತ್ಯಕ್ರಿಯೆ ನವಲಗುಂದ ತಾಲೂಕಿನ ಸ್ವಗ್ರಾಮ ಅಮರಗೋಳ ದಲ್ಲಿ ಸೋಮವಾರ ಸಾಯಂಕಾಲ 5 ಗಂಟೆಗೆ ಜರುಗಲಿದೆ ಎಂದು ತಿಳಿದುಬಂದಿದೆ.

ಅವರ ಅಗಲಿಕೆಯಿಂದ ಶಾಸಕರು ಹಾಗೂ ಅವರ ಕುಟುಂಬಸ್ಥರ ಜಂಗಾಬಲವೇ ಕುಸಿದುಹೋಗಿದೆ. ಅವರಅಗಲಿಕೆಯ ನೋವು ಭರಿಸುವ ಶಕ್ತಿ ಕುಟುಂಬವರ್ಗದವರಿಗೆ ನೀಡಲಿ ಎಂದು ಅನೇಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *