ಮುಂಬೈ prajakiran.com :
ಮಹಾರಾಷ್ಟ್ರದ ಮಹಾಡ್ ದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಮಹಾಡ್ ತಾಲೂಕಿನ ಕಲ್ಲೈನಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ.
ಇದರಲ್ಲಿ ಸಿಲುಕಿರುವವರೆ ಸಂಖ್ಯೆ ಇವರೆಗ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಒಂದು ಅಂದಾಜಿನ ಪ್ರಕಾರ 300ಕ್ಕೂ ಹೆಚ್ಚು ಜನರು ಈ ಭೂ ಕುಸಿತದಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈಗಾಗಲೇ ಘಟನಾ ಸ್ಥಳಕ್ಕೆ ದೌಡಾಯಿಸಿರುವ ಎನ್ ಡಿಆರ್ ಎಫ್ ತಂಡ ಸತತ ಕಾರ್ಯಾಚರಣೆ ನಡೆಸುತ್ತಿದೆ.
ಭಾರಿ ಮಳೆಯ ಕಾರಣದಿಂದ ನಿರೀಕ್ಷಿತ ಕಾರ್ಯಾಚರಣೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮತ್ತೆ ಕೇಂದ್ರ ಸರಕಾರದ ನೆರವು ಕೇಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ರತ್ನಗಿರಿ ಜಿಲ್ಲೆಯ ಕೆಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಮಳೆ ಸತತವಾಗಿ ಮುಂದುವರೆದ ಪರಿಣಾಮ ದೇಶದ ಪ್ರಸಿದ್ದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಭೀಮಾ ಶಂಕರ ಲಿಂಗ ದೇವಸ್ಥಾನ ಜಲಾವೃತವಾಗಿದೆ.
ಈ ಹಿನ್ನೆಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಕಾರ್ಯ ಮುಂದುವರಿದಿದೆ.