ರಾಜ್ಯ

ಪಶ್ಚಿಮ ಪದವೀಧರ ಮತಕ್ಷೇತ್ರದ ಅಭ್ಯರ್ಥಿಗಳಿಗೆ ತಲುಪದ ಮತದಾರರ ಪಟ್ಟಿ : ನೀರಲಕೇರಿ ಅಸಮಾಧಾನ

ಧಾರವಾಡ prajakiran. com : ಪಶ್ಚಿಮ ಪದವೀಧರ ಮತಕ್ಷೇತ್ರದುನಾವಣೆಗೆ ಕೇವಲ ಒಂದುವಾರವಷ್ಟೇ ಬಾಕಿಯಿದ್ದರೂ ಈವರೆಗೆ ಅಭ್ಯರ್ಥಿಗಳಿಗೆ ಮತದಾರರ ಅಂತಿಮ ಪಟ್ಟಿ ತಲುಪದಿರುವುದು ಸರಿಯಾದ ಬೆಳವಣಿಗೆ ಅಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಶ್ಲೇಷಕ ಹಾಗೂ ಕೆಪಿಸಿಸಿ ಚುನಾವಣೆ ಕಾನೂನು ಸಮಿತಿ ಸದಸ್ಯರು ಆಗಿರುವ ಪಿ.ಎಚ್
ನೀರಲಕೇರಿ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಸೋಮವಾರ ನಗರದಲ್ಲಿ ಪ್ರಜಾಕಿರಣ.ಕಾಮ್ ದೊಂದಿಗೆ ಮಾತನಾಡಿ ಧಾರವಾಡ ಜಿಲ್ಲೆಯ ಅಧಿಕಾರಗಳ ನಡುವೆ ಹೊಂದಾಣಿಕೆ ಕೊರತೆ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಅಧಿಕಾರಿಗಳು ತಮ್ಮ ಬಳಿ ಮಾಹಿತಿಯಿಲ್ಲ ಎಂದು ನುಣುಚಿಕೊಳ್ಳುವ ಮೂಲಕ ಜವಾಬ್ದಾರಿ ಹಾಗೂ ಹೊಣೆಗಾರಿಕೆ ಮರೆತಿದ್ದಾರೆ ಎಂದು ದೂರಿದರು.

ಅ. ೮ ರಂದು ಅಂತಿಮ‌ಪಟ್ಟಿ ಸಿದ್ದಗೊಂಡು ಅ. ೧೦ ಇಲ್ಲವೇ ೧೧ ರಂದು ತಲುಪಬೇಕಾದ ಪಟ್ಟಿ ಅ. ೧೯ರಂದು ಸಂಜೆ ೪.೩೦ ಆದರೂ
ನಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಎಜೆಂಟರಿಗೆ ಗದಗ ಜಿಲ್ಲೆಯ ಮತದಾರರ ಪಟ್ಟಿ ದೊರೆತಿಲ್ಲ.

ಇದು ಎನನ್ನು ಸೂಚಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಚುನಾವಣಾ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಪಿ.ಎಚ್. ನೀರಲಕೇರಿ ಆಗ್ರಹಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *