ಧಾರವಾಡ prajakiran.com :ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮಾಜಿ ಕಾರ್ಯಾಧ್ಯಕ್ಷ ಆರ್ ಎಫ್ ನೀರಲಕಟ್ಟಿ (80) ಬುಧವಾರ ನಿಧನ ಹೊಂದಿದರು.
ಆರ್ ಎಫ್ ನೀರಲಕಟ್ಟಿ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು..
ರಾಜ್ಯದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಬೆಳೆಯಲು ಕಾರಣಿಭೂತರಾಗಿದ್ದ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲೆಂದು ಕೇಂದ್ರ ಕಲ್ಲಿದ್ದಲು ಹಾಗು ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ವಿದೇಶಾಂಗ ಸಹಾಯಕ ಸಚಿವರು ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ವಿ ಮುರಳಿಧರನ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.
ಅಲ್ಲದೆ ಅವರ ಆತ್ಮಕ್ಕೆ ಶಾಂತಿ ಕೋರಿ ಧಾರವಾಡದಲ್ಲಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.
ಇವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರಕಾರ ಇವರಿಗೆ ಗಂಗಾಸರಣ ಪ್ರಶಸ್ತ್ತಿಯನ್ನು ನೀಡಿ ಗೌರವಿಸಿತ್ತು.
ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಶಿವಯೋಗಿ ನೀರಲಕಟ್ಟಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಏ. 22 ರಂದು ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ನವಲಗುಂದ ರಸ್ತೆಯ ಫಾರ್ಮ್ ಹೌಸ್ ನಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.