ಧಾರವಾಡ prajakiran.com : ಜಿಲ್ಲೆಯಲ್ಲಿ ಮಳೆಯಿಂದ ಹಲವಾರು ಸಾಂಕ್ರಾಮಿಕ ರೋಗ ಹೋರಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕೈಗೊಂಡಿಲ್ಲ.
ಜಿಲ್ಲಾ ಆಸ್ಪತ್ರೆಗೆ ಅವ್ಯವಸ್ಥೆ ಆಗರವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಅಪಾಯದ ಮಧ್ಯೆ ಇದೀಗ ಟೊಮೆಟೊ ಜ್ವರ ಎಲ್ಲೆಡೆ ಹರಡುತ್ತಿದೆ.
ಸರ್ಕಾರ ಮತ್ತು ಜಿಲ್ಲಾ ಆಡಳಿತದ ನಿರ್ಲಕ್ಷ್ಯದಿಂದ ಸಾಂಕ್ರಾಮಿಕ ರೋಗಗಳು ವೇಗವಾಗಿ ಹರಡುತ್ತಿವೆ. ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿವೆ.
ಇದರಿಂದ ಜನರು ಆತಂಕ ಸ್ಥಿತಿ ನಿರ್ಮಾಣವಾಗಿದೆ.
ಅದಾಗ್ಯೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚರಿಕೆ ವಹಿಸುತ್ತಿಲ್ಲ ಎಂದ ಕಳವಳ ವ್ಯಕ್ತಪಡಿಸಿದರು.
ಅಳ್ನಾವರ ಸಮೀಪದ ಹಳ್ಳಿಯೊಂದರಲ್ಲಿ ಮಗು ಜ್ವರದಿಂದ ಬಳಲಿ ಸಾವಿಗಿಡಾಗಿದ್ದು, ಈ ಕುರಿತು ಜಾಗೃತಿ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಡುವುತ್ತಿದೆ ಎಂದು ಆರೋಪಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಸದ ರಾಶಿಯೇ ಬಿದ್ದಿವೆ. ಇದರಿಂದ ಹಲವಾರು ರೋಗ ಹರಡುತ್ತಿದೆ.
ಈ ಕುರಿತು ಪಾಲಿಕೆ ಆಯುಕ್ತರು ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಇನ್ನೊಂದೆಡೆ ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಇದೆ.
ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ ಕವಿತಾ ಕಬ್ಬೇರ, ಭೀಮಸೇನ ಕಾಗೆ ಇದ್ದರು.