ಬೆಂಗಳೂರು prajakiran.com ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದೆ.
ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.
ಹಿರಿಯ ಶಾಸಕರಾದ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶಾಸಕ ಬಿ.ಸಿ ಪಾಟೀಲ ರೈತರು ಹಾಗೂ ಜಗಜ್ಯೋತಿ ಬಸವೇಶ್ವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಜಿ ಸಿಎಂ ಬಿ.ಎಸ. ಯಡಿಯೂರಪ್ಪ ,ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಅನೇಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.