ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ನೀಡಲು ಮತ್ತೆ ಹೈಕೋರ್ಟ್ ನಿರಾಕರಿಸಿದೆ.
ಸೋಮವಾರ ಮೇ. 24ರಂದು
ಹೈಕೋರ್ಟ್ ನ್ಯಾರ್ಯಮೂರ್ತಿ ಕೆ. ನಟರಾಜನ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಏ. 22 ರಂದು
ಗುರುವಾರ ಜಾಮೀನು
ಅರ್ಜಿ ತೀರ್ಪು ಕಾಯ್ದರಿಸಿ
ಮಹತ್ವದ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಹಿರಿಯ ಶಶಿಕಿರಣ ಶೆಟ್ಟಿ ಅವರು ವಾದ ಮಂಡಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಅದಕ್ಕೆ ಪ್ರತಿಯಾಗಿ ಸಿಬಿಐ ಪರ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು ಸುದೀರ್ಘವಾದ ಪ್ರತಿವಾದ ಮಂಡಿಸಿ,ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿ ಇದೆ.
ಅವರ ವಿರುದ್ಧ ಸಾಕಷ್ಟು ಪ್ರಬಲ ಸಾಕ್ಷ್ಯಗಳಿದ್ದು, ಅನೇಕರು ನ್ಯಾಯಾಲಯ ಎದುರು 164 ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದ ಮಂಡಿಸಿ, ಹೈಕೋರ್ಟ್ ಗಮನ ಸೆಳೆದಿದ್ದರು.
ಹೀಗಾಗಿ ವಾದ ಪ್ರತಿವಾದ ಆಲಿಸಿದ
ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ತೀರ್ಪು ಕಾಯ್ದಿರಿಸಿದ್ದು ತೀವ್ರ ಕುತೂಹಲ ಕೆರಳಿಸಿತ್ತು.
ಅವರ ಅಭಿಮಾನಿಗಳು ಜಾಮೀನು ಸಿಗುವ ನಿರೀಕ್ಣೆಯಲ್ಲಿದ್ದರು.
ಆದರೆ ಇದೀಗ ಮತ್ತೆ ಜಾಮೀನು ಅರ್ಜಿ ವಜಾಗೊಂಡಿರುವುದು ನಿರಾಶೆ ಮೂಡಿಸಿದೆ.
ಈ ಹಿಂದೆ ಕೂಡ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾಗ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.
ಆದರೆ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತೆ ಅವರ ಎದುರು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಎರಡನೇ ಬಾರಿಗೆ ಅರ್ಜಿ ವಿಚಾರಣೆ ನಡೆಸಿ ಜಾಮೀನು ಅರ್ಜಿ ವಜಾಗೊಳಿಸಿರುವುದು ಇಲ್ಲಿ ಗಮನಿಸಬಹುದು.
ಈ ಹಿಂದೆ ಕೂಡ ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.