ಧಾರವಾಡ prajakiran.com : ಧಾರವಾಡ ತಾಲೂಕಿನ ನಿಗದಿ ಗ್ರಾಮದ ದೊಡ್ಡ ಕೆರೆ ಕಟ್ಟಿ ಬಿರುಕು ಬಿಟ್ಟಿದ್ದು, ಇದರಿಂದಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾದ ಬೆನ್ನಲ್ಲೇ ಕೆರೆ ಬಿರುಕು ಬಿಟ್ಟಿರುವುದು ಕಂಗಲಾಗಿಸಿದೆ.
ಈ ಬಗ್ಗೆ ಈಗಾಗಲೇ ಹಲವು ಅವಾಂತರಗಳನ್ನ ಸೃಷ್ಟಿಸಿರುವ ಮಳೆರಾಯನ ಆರ್ಭಟ ಹೆಚ್ಚಾಗಿದ್ದರಿಂದ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಕೆರೆ ಕಟ್ಟೆ ಬಿರುಕು ಬಿಟ್ಟಿದೆ ಎನ್ನಲಾಗಿದೆ.
ಸುಮಾರು 30 ರಿಂದ 40 ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಗೋಡೆ ಬಿರುಕು ಬಿಟ್ಟಿದ್ದರಿಂದಅದರ ಕೆಳಗಿನ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ಹಾಳಾಗುವ ಸಾಧ್ಯತೆಗಳಿವೆ.
ಅದರಲ್ಲೂ ವಾಣಿಜ್ಯ ಬೆಳೆಗಳಾದ ಕಬ್ಬು ಭತ್ತ ಇನ್ನು ಒಂದು ತಿಂಗಳಲ್ಲಿ ರೈತನ ಕೈಗೆ ಸಿಗಲಿದೆ. ಇಂತಹ ಸಂದರ್ಭದಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ ಗತಿಯೇನು ಎಂಬುದು ರೈತರ ಪ್ರಶ್ನೆಯಾಗಿದೆ.
ಇನ್ನು ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳಗೆ ಮಾಹಿತಿ ನೀಡಿದರೆ ಕೆರೆ ಕಟ್ಟೆ ಬಿರುಕು ಮುಚ್ಚುವ ವ್ಯವಸ್ಥೆ ಮಾಡಿರಿ ಎಂದು ಕೈ ತೊಳೆದುಕೊಂಡಿದ್ದಾರೆ.
ಈ ಬಗ್ಗೆ ನಿಗದಿ ಗ್ರಾಮದ ಪಿಡಿಓ ಮೊರೆ ಹೋದರೆ, ಪಿಡಿಓ ಉದ್ಧಟತನ ತೋರುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಈಗಲಾದರೂ ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸ್ಪಂದಿಸುತ್ತಾರೆಯೇ ಇಲ್ಲವೇ ಎಂಬುದು ಕಾದುನೋಡಬೇಕಾಗಿದೆ.