ಬೆಂಗಳೂರು prajakiran.com : ರಾಜ್ಯದಲ್ಲಿ ಓವಿಕ್ರಾನ್ ವೇಗವಾಗಿ ಹರಡುತ್ತಿರುವ ಬೆನ್ನ ಹಿಂದೆಯೇ ರಾಜ್ಯಾದ್ಯಂತ ಡಿ. 28 ರಿಂದ ಹತ್ತು ದಿನಗಳ ಕಾಲ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಅವರು ಭಾನುವಾರ ಬೆಳಗ್ಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ.
ಈಗಾಗಲೇ ರಾಜ್ಯದಲ್ಲಿ 38 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ 350ರ ಗಡಿ ದಾಟಿದೆ.
ಅದರ ನಿಯಂತ್ರಣ ಸಾಧಿಸಲು ಈ ಕ್ರಮ ಜರುಗಿಸಲಾಗಿದೆ. ಲಸಿಕೆ ಪಡೆಯದವರು ತಕ್ಷಣ ತೆಗೆದುಕೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹೊಸ ವರ್ಷಾಚರಣೆಗೆ ಮುನ್ನವೇ ರಾತ್ರಿ ಕರ್ಪ್ಯೂ ಜಾರಿಯಾಗಿರುವುದು ಎಣ್ಣೆ ಪ್ರಿಯರಿಗೆ ಅಡ್ಡಿಯಾಗಿದೆ ಎಂದರೆ ತಪ್ಪಾಗಲಾರದು.