ನವದೆಹಲಿ prajakiran.com : ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ಕ್ಷೇತ್ರಗಳಿಗೆ ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂ. ಗಳ ವಿಶೇಷ ಆರ್ಥಿಕ ನೆರವು ತುರ್ತು ಅನುದಾನವನ್ನು ಘೋಷಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವೈದ್ಯಕೀಯ ಮೂಲಸೌಕರ್ಯಕ್ಕೆ 50 ಸಾವಿರ ಕೋಟಿ ಹಾಗೂ ಉಳಿದ ವಲಯಗಳಿಗೆ 60 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ಕಳೆದ ವರ್ಷ ಘೋಷಿಸಿದ್ದ ತುರ್ತು ಕ್ರೆಡಿಟ್ ಲಿಂಕಿಂಗ್ ಸ್ಕೀಮ್ ಗೆ 1.5 ಲಕ್ಷ ಕೋಟಿ ಹೆಚ್ಚುವರಿ ಘೋಷಣೆ ಮೂಲಕ ಒಟ್ಟು 4.5 ಲಕ್ಷ ಕೋಟಿ ಅನುದಾನ ಘೋಷಿಸಲಾಗಿದೆ.
ಶೇ.7.95ರ ಬಡ್ಡಿದರದಲ್ಲಿ 8 ಮಹಾನಗರ ಹೊರತುಪಡಿಸಿ ಉಳಿದೆಡೆ ಆರೋಗ್ಯ ಸೌಕರ್ಯಕ್ಕೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.