ಹುಬ್ಬಳ್ಳಿ prajakiran.com : ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಮತ್ತು ವಿಲೀನ ಮಾಡಿಕೊಳ್ಳುವ ಪ್ರಸ್ತಾಪ ಬಿಜೆಪಿ ಮುಂದಿಲ್ಲ. ವಿಷಯಾಧಾರಿತ ಹೊಂದಾಣಿಕೆಯೇ ಬೇರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅವರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ವಿಧಾನ ಪರಿಷತ್ನಲ್ಲಿ ಬಿಜೆಪಿ ಸಂಖ್ಯಾಬಲ ಇಲ್ಲ. ಹಾಗಾಗಿ ಅಲ್ಲಿ ವಿಷಯಾಧಾರಿತ ಹೊಂದಾಣಿಕೆ ಮಾಡಕೊಳ್ಳಲಾಗಿದೆ ಎಂದು ಹೇಳಿದರು.
ಅದನ್ನು ಬಿಟ್ಟರೆ ಜೆಡಿಎಸ್ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದರು.
ಸ್ವಂತ ಬಲದ ಮೇಲೆ ದೇಶಾದ್ಯಂತ ಪಕ್ಷವನ್ನು ಸಂಘಟಿಸಿದ್ದೇವೆ ಎಂದು ಹೇಳಿದರು.
ಇನ್ನು ತೆಲಂಗಾಣ ಉಪಚುನಾವಣೆ, ಹಿಮಾಚಲ ಪ್ರದೇಶ ಸ್ಥಳೀಯ ಚುನಾವಣೆ ಸೇರಿದಂತೆ ಬಹುತೇಕ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಿದೆ. ಹಾಗಾಗಿ ಜೆಡಿಎಸ್ ಜತೆ ವಿಲೀನ ಮಾತುಕತೆಯೇ ಇಲ್ಲ ಎಂದರು.
ಇದೇ ವೇಳೆ ಕೊರೊನಾ ವೈರಸ್ ರೂಪಾಂತರ ಹಿನ್ನೆಲೆಯಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಸ್ತಾವನೆ ನಮ್ಮ ಬಳಿ ಬಂದಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.