ಅಂತಾರಾಷ್ಟ್ರೀಯ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಪ್ರಶ್ನೇಯೇ ಇಲ್ಲ ಎಂದ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ

ಧಾರವಾಡ prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೆಸರು ಕೇಳಿಬಂದ ನಂತರ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಮಂತ್ರಿ ಸ್ಥಾನವು ಸಿಗದೆ ಮುನಿಸಿಕೊಂಡಿರುವ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಪ್ರತಿಯಾಗಿ ಸ್ಪಷ್ಟನೆ ನೀಡಿರುವ ಶಾಸಕ ಅರವಿಂದ ಬೆಲ್ಲದ ಇದು ಸುಳ್ಳು ಸುದ್ದಿ
ಹಾಗೂ ಕಪೋಲಕಲ್ಪಿತ ಸುದ್ದಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅದರ ಸಂಪೂರ್ಣ ವಿವರ ಹೀಗಿದೆ.

ಆತ್ಮೀಯರೇ.,

ಕೆಲ ಮಾಧ್ಯಮಗಳಲ್ಲಿ ನಾನು ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದೇನೆ ಎಂಬ ಸುಳ್ಳು ಹಾಗೂ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ.

ಇದೊಂದು ಸತ್ಯಕ್ಕೆ ದೂರವಾದ ಹಾಗೂ ದುರುದ್ದೇಶಪೂರ್ವಕ ವರದಿ. ಸಾಮಾಜಿಕ ಜಾಲ ತಾಣಗಳಲ್ಲೂ ಇದೇ ಬಗೆಯ ಸುಳ್ಳು ಸಂದೇಶವನ್ನು ಹಬ್ಬಿಸುವ ಪ್ರಯತ್ನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಈ ವಿಚಾರವನ್ನು ನಾನು ನಿರ್ಲಕ್ಷಿಸಬಹುದಿತ್ತು. ಆದರೆ ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ.

ನಾನು ಬಿಜೆಪಿ ತೊರೆಯುವ ಅಥವಾ ಅನ್ಯ ಪಕ್ಷ ಸೇರುವುದನ್ನು ಕಾಯಾ, ವಾಚಾ, ಮನಸಾ ಕಲ್ಪಿಸಲೂ ಸಾಧ್ಯವಿಲ್ಲ. ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹಬ್ಬಿರುವ ವದಂತಿಗೆ ಯಾರೂ ಬೆಲೆ ಕೊಡಬಾರದು ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ.

ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೂ ನಾನು ಸಿದ್ಧತೆ ನಡೆಸಿದ್ದೇನೆ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *