ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಬದಲಾವಣೆ ಕುರಿತು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೂ ಧಾರವಾಡದ ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ ಹಾಗೂ ನಮಗೂ ಅದಕ್ಕೆ ಒಮ್ಮತವಿಲ್ಲವೆಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಕುರಿತು ವೀಡಿಯೋ ಹೇಳಿಕೆ ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುರುಘಾಮಠ ಲೋಕಕಲ್ಯಾಣಾರ್ಥ ಸ್ಥಾಪನೆಯಾಗಿದ್ದು, ಮಠದ ಹಿರಿಯ ಶ್ರೀಗಳು ಮದಥಣಿ ಶ್ರೀಗಳು, ಮುರುಘಾರಾಜೇಂದ್ರ ಶ್ರೀಗಳು, ಮೃತ್ಯುಂಜಯ ಅಪ್ಪಗೊಳ, ಮಹಾಂತ ಅಪ್ಪಗೊಳ ಹಾಗೂ ಹಲವಾರು ಧೀಮಂತ ಭಕ್ತಾಧಿಗಳ ಪರಿಶ್ರಮದ ಫಲದಿಂದ ಸ್ಥಾಪಿತ ಹಾಗೂ ಸರ್ವಸಮಾಜದ ಭಕ್ತರು ನಡೆದುಕೊಳ್ಳುವ ಪವಿತ್ರ ಕ್ಷೇತ್ರವಿದು.
ಶ್ರೀ ಕ್ಷೇತ್ರ ವಿದ್ಯಾದಾನ ದಾಸೋಹಕ್ಕೆ ಹಾಗೂ ಸರ್ವಸಮಾಜದ ಏಳಿಗೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ವೀರಶೈವ ಲಿಂಗಾಯತ ಮಠವಾಗಿದ್ದರೂ ಸಹ ಸರ್ವಸಮಾಜದ ಭಕ್ತರು ಗದ್ದುಗೆಯ ಆರಾಧಕರಿದ್ದಾರೆ.
ಶ್ರೀ ಕ್ಷೇತ್ರ ಮುರುಘಾಮಠ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ. ಹಾಗೂ ರಾಜಕೀಯ ವಿಷಯಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ಯಾವುದೇ ಅಭ್ಯರ್ಥಿ ಆಯ್ಕೆ ಆಯಾ ಪಕ್ಷದ ವರಿಷ್ಠರು ಹಾಗೂ ಅವರ ಪಕ್ಷದ ತೀರ್ಮಾನ. ಇದಕ್ಕೆ ಮಠಮಾನ್ಯಗಳಿಗೂ ಯಾವುದೇ ಸಂಬಂಧವಿರುವದಿಲ್ಲ ಎಂದು ವಿವರಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ನಿನ್ನೆ ದಿನಾಂಕ: 27/03/2024 ರಂದು ದಿಂಗಾಲೇಶ್ವರ ಸ್ವಾಮಿಗಳು ಮೂರುಸಾವಿರ ಮಠದಲ್ಲಿ ಸ್ವಾಮಿಗಳ ಸಭೆ ಅಂತ ಮಠಕ್ಕೆ ಕರೆದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಹ್ಲಾದ ಜೋಶಿಯವರ ಬದಲಾವಣೆ ಕುರಿತು ನೀಡಿದ ಹೇಳಿಕೆ ಶ್ರೀ ದಿಂಗಾಲೇಶ್ವರ ಸ್ವಾಮಿಗಳ ವೈಯಕ್ತಿಕ ಹೇಳಿಕೆ ಆಗಿದ್ದು, ಹಾಗೂ ಹೇಳಿಕೆಯು ವಿವಾದಾಸ್ಪದವಾಗಿದ್ದು ಸದರಿ ಹೇಳಿಕೆಗೂ ನಮಗೂ ಹಾಗೂ ಶ್ರೀ ಕ್ಷೇತ್ರ ಮುರುಘಾಮಠಕ್ಕೆ ಯಾವುದೇ ಸಂಬಂಧವಿರುವದಿಲ್ಲ.
ಇಂತಹ ಹೇಳಿಕೆಗಳು ಅವರವರ ವೈಯಕ್ತಿಕ ಹೇಳಿಕೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮಿಗಳಾದ ನಾನು ಪತ್ರಿಕಾ ಪ್ರಕಟಣೆ ನೀಡಿ ಸ್ಪಷ್ಟಿಕರಣ ನೀಡುತ್ತಿದ್ದೇನೆ ಎಂದು ವಿವಾದಕ್ಕೂ ತಮಗೂ ಸಂಬಂಧವಿಲ್ಲಾ ಎಂದಿದ್ದಾರೆ.