ಬೆಂಗಳೂರು prajakiran.com : ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಈ ಕರ್ಫ್ಯೂ ವಿಸ್ತರಣೆ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ.
ಕರ್ಫ್ಯೂ ನಿಯಮದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನ ವಾರಪೂರ್ತಿ ಲಾಕ್ಡೌನ್ ಮಾಡುವ ಬಗ್ಗೆ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ.
ಈಗಾಗಲೇ ವೀಕೆಂಡ್ ಕರ್ಫ್ಯೂ ರಾಜ್ಯಾದ್ಯಂತ ಯಶಸ್ವಿಯಾಗಿದ್ದು, ಜನರು ಸಹಕಾರ ನೀಡಿದ್ದಾರೆ. ಹಾಗಾಗಿ ಸದ್ಯ ಕರ್ಫ್ಯೂ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಈಗಾಗಲೇ 800 ಟನ್ ಆಕ್ಸಿಜನ್ ಕಳುಹಿಸುವ ಭರವಸೆ ನೀಡಿದೆ.
ಸದ್ಯ ಬೇಡಿಕೆ ಪೂರ್ಣವಾಗಿದ್ದು, ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಆಕ್ಸಿಜನ್ ಸಿಗಲಿದೆ ಎಂದರು.