ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ವಿಧಾನ ಸಭಾ ಕ್ಷೇತ್ರ-71ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಧಾರವಾಡ ಪ್ರವೇಶಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಯಂತ್ ಕುಮಾರ್ ಅವರು ಈ ಮಹತ್ವದ ಆದೇಶ ಹೊರಡಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ಹಿರಿಯ ವಕೀಲರಾದ ಸಿ.ಎಚ್. ಹನುಮಂತರಾಯ ಅವರು ಪ್ರಬಲವಾದ ವಾದ ಮಂಡಿಸಿ, ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಕೇವಲ 50 ದಿನಗಳಿಗೆ ಮಾತ್ರವಾದರೂ ನೀಡಲೇಬೇಕು ಎಂದು ಗಮನ ಸೆಳೆದರು.
ಸಿಬಿಐ ಪರ ವಕೀಲರಾದ ಗಂಗಾಧರ ಶೆಟ್ಟಿ ವಾದ ಮಂಡಿಸಿ, ಅತಿಹೆಚ್ಚು ಸಾಕ್ಷ್ಯಿಗಳು ಧಾರವಾಡದಲ್ಲಿರುವುದರಿಂದ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನಿರಾಕರಿಸಿ ಆದೇಶ ಹೊರಡಿಸಿತು.