*ಮಾಜಿಸಚಿವ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ನಕಾರ*
*ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು*
*ಧಾರವಾಡ ಎಂಟ್ರಿಗೆ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ*
*ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ*
*ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾವಣೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ*
ಧಾರವಾಡ ಪ್ರಜಾಕಿರಣ.ಕಾಮ್ :
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಯರ್ ಅಭ್ಯರ್ಥಿ ಪರ ಮತ ಚಲಾಯಿಸಲು ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಕೋರಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಶನಿವಾರ ವಾದ-ಪ್ರತಿವಾದ ಆಲಿಸಿದ ಬಳಿಕಜೂ. 19ರಂದು ತೀರ್ಪು ನೀಡುವುದಾಗಿ ವಿಚಾರಣೆ ಮುಂದೂಡಿತ್ತು.
ಈಗ ತೀರ್ಪು ಪ್ರಕಟಗೊಂಡಿದ್ದು, ಕೊನೆಗೂ ಧಾರವಾಡ ಎಂಟ್ರಿಗೆ ಅವಕಾಶ ನಿರಾಕರಿಸಿ ಮಹತ್ವದ ಆದೇಶ ಹೊರಡಿಸಿದೆ.
ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗರಿಗೆ ತೀವ್ರ ನಿರಾಸೆಯಾಗಿದೆ.