ಧಾರವಾಡ prajakiran.com : ಸರ್ಕಾರ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಿದೆ.
ಆದ್ದರಿಂದ ಇತರ ಜಿಲ್ಲೆಗಳಿಂದ ಬರುವ ಗಂಟಲುದ್ರವ ಮಾದರಿಗಳನ್ನು ಸ್ವೀಕರಿಸದೆ ಮರಳಿ ಆಯಾ ಜಿಲ್ಲೆಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹೇಳಿದರು.
ಅವರು ಧಾರವಾಡ ಜಿಲ್ಲೆಯ ಗಂಟಲುದ್ರವ ಮಾದರಿಗಳ ಪರೀಕ್ಷೆ ನಿಧಾನವಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಜಿಲ್ಲಾಡಳಿತ ಮತ್ತು ಸರ್ಕಾರ ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಮಾಡಿ ಫಲಿತಾಂಶ ನೀಡುವಂತೆ ಸೂಚನೆ ನೀಡಬೇಕೆಂದು ತಿಳಿಸಿದರು.
ಧಾರವಾಡ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಜಿಲ್ಲೆಯ ಪ್ರಯೋಗಾಲಯಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಬೇಕು.
ಪ್ರತಿ ಖಾಸಗಿ ಆಸ್ಪತ್ರೆ ಮುಂದೆ ಹೆಲ್ಫ್ ಡೆಸ್ಕ್ ಆರಂಭಿಸಿ, ಹಾಸಿಗೆ ಲಭ್ಯತೆ ಬಗ್ಗೆ ಫಲಕ ಹಾಕಲು ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಜಿಲ್ಲೆಯ ಶಾಸಕರನ್ನು ಬಳಸಿಕೊಂಡು ಪ್ರತಿ ಖಾಸಗಿ ಆಸ್ಪತ್ರೆಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಜಿಲ್ಲಾಡಳಿತ ಶಾಸಕರನ್ನು ತೊಡಗಿಸಿಕೊಳ್ಳಬೇಕಂದು ತಿಳಿಸಿದರು.