ರಾಜ್ಯ

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ : ಏಳು ಅಭ್ಯರ್ಥಿಗಳ ನಾಮಪತ್ರ ಸಿಂಧು: ಇಬ್ಬರ ನಾಮಪತ್ರ ತಿರಸ್ಕೃತ

ಧಾರವಾಡ prajakiran.com ಮೇ.27:

ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಕಾರ್ಯ ಇಂದು ಬೆಳಗಾವಿಯಲ್ಲಿ ಜರುಗಿತು.

ಏಳು ಅಭ್ಯರ್ಥಿಗಳ ನಾಮಪತ್ರಗಳ ಸಿಂಧುವಾಗಿವೆ.ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ಅಸಿಂಧುವಾಗಿವೆ.

ತುಳಸಪ್ಪ ಕೆ.ದಾಸರ್ ಅವರು ಈ ಹಿಂದಿನ‌ ಚುನಾವಣೆಗಳ ವೆಚ್ಚದ ವಿವರ ಸಲ್ಲಿಸದ ಕಾರಣ ಭಾರತ ಚುನಾವಣೆ ಆಯೋಗವು 2024 ರವರೆಗೆ ಚುನಾವಣೆಗೆ ಸ್ಪರ್ಧಿಸಲು ಅವರನ್ನು ಅನರ್ಹಗೊಳಿಸಿದೆ.

ವಿನಾಯಕ ವಿ.ಕಾಚಟ್ಟಿಯವರ ಎಂಬ ಅಭ್ಯರ್ಥಿಯು 28 ವರ್ಷದವರಾಗಿದ್ದು,ಕನಿಷ್ಠ ವಯೋಮಿತಿ 30 ವರ್ಷ ತುಂಬಿರದ ಕಾರಣ ಅವರ ನಾಮಪತ್ರ ತಿರಸ್ಕಾರಗೊಂಡಿವೆ.

ಉಳಿದ ಏಳು ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ.

ನಾಮಪತ್ರಗಳನ್ನು ಹಿಂಪಡೆಯಲು ಮೇ.30 ರವರೆಗೆ ಅವಕಾಶವಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾಗಿರುವ,ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *