ಬೆಂಗಳೂರು prajakiran.com : ರಾಜ್ಯಾದ್ಯಂತ ಶುಲ್ಕ ಹೆಚ್ಚಿಸಿದ್ದ ಒಂದು ಸಾವಿರ ಖಾಸಗಿ ಶಾಲೆಗಳಿಗೆ ನೋಟಿಸ್ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ.
ಕರೋನಾದಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಶಾಲಾ ಆಡಳಿತಮಂಡಳಿಗೆ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಿಸಬಾರದು ಎಂದು ಹೇಳಲಾಗಿದೆ. ಆದರೂ ಶಾಲೆಗಳು ನಿಯಮ ಬಾಹಿರವಾಗಿ ವಸೂಲಿಗೆ ಮುಂದಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ 350 ಶಾಲೆಗಳು ಶುಲ್ಕ ಇಳಿಸಿವೆ. ಉಳಿದ ಶಾಲೆಗಳು ಭಂಡತನ ತೋರಿದರೆ ನಿಯಮದ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಆನ್ ಲೈನ್ ಶಿಕ್ಷಣಕ್ಕೆ ಬ್ರೇಕ್ :
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಆನ್ ಲೈನ್ ಶಿಕ್ಷಣ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ.
ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪಾಲಕರಿಗೆ ಹೊರೆ ಮಾಡುವಂತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಪೋಷಕರು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದು, ಇದು ರಾಜ್ಯ, ಕೇಂದ್ರ ಹಾಗೂ ಐಸಿ ಎಸ್ಸಿ ಪಠ್ಯಕ್ರಮ ಹೊಂದಿರುವ ಎಲ್ಲಾ ಶಾಲೆಗಳಿಗೆ ಅನ್ವಯಿಸಲಿದೆ ಎಂದು ವಿವರಿಸಿದ್ದಾರೆ.
ಎಲ್ಲಾ ರೀತಿಯ ಆನ್ ಲೈನ್ ಶಿಕ್ಷಣ, ಶಾಲೆ, ಟೀಚಿಂಗ್ ಕ್ಲಾಸ್ ಗಳನ್ನು ರದ್ದುಗೊಳಿಸಲಾಗಿದೆ. ಆನ್ ಲೈನ್ ಶಿಕ್ಷಣಕ್ಕಾಗಿ ಯಾವುದೇ ರೀತಿಯ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಈ ರೀತಿಯ ಶಿಕ್ಷಣ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಕಲಿಕೆಯ ಸಾಮರ್ಥ್ಯ ಕುಂಠಿತವಾಗುತ್ತದೆ ಎಂದು ತಜ್ಞರಿಂದ ವರದಿ ಬಂದ ಹಿನ್ನಲೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.