ರಾಜ್ಯ

ರಾಜ್ಯಾದ್ಯಂತ ಅ. 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ

ಬೆಂಗಳೂರು prajakiran.com : ರಾಜ್ಯದಲ್ಲಿ ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಅವರು ಈ ಕುರಿತು ಭಾನುವಾರ ಟ್ವೀಟ್ ಮಾಡಿದ್ದು, ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಯಡಿಯೂರಪ್ಪ @BSYBJP ಆದೇಶಿಸಿದ್ದಾರೆ.

ಇದು ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ ಸಂತಸ ತಂದಿದ್ದು, ದಸರಾ ರಜೆ ಘೋಷಿಸುವಂತೆ ಇತ್ತೀಚೆಗೆ ಶಿಕ್ಷಕರ ಸಂಘಟನೆಗಳು ಸರಕಾರಕ್ಕೆ ಆಗ್ರಹಿಸಿದ್ದವು.

ಕೊನೆಗೂ ಶಾಲೆಗಳ ಬಂದ್ ನಡುವೆ ಕರೋನಾ ಆತಂಕದಿಂದ ಶಿಕ್ಷಕರಿಗೆ ದಸರಾ ರಜೆ ಘೋಷಿಸಿರುವುದು ಶಿಕ್ಷಕರಿಗೆ ಸ್ವಲ್ಪ ಸಮಾಧಾನ ತಂದರೆ, ಪೋಷಕರಿಗೆ ಹಾಗೂ ಮಕ್ಕಳಿಗೆ ಬಲವಂತದ ಬಂದ್ ಘೋಷಿಸಿದಂತಾಗಿದೆ ಎಂದು ಹಿಡಿಶಾಪ ಹಾಕುವಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *