ಧಾರವಾಡ prajakiran.com : ಜಿಲ್ಲೆಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ವಿದ್ಯಾರ್ಥಿಗಳಿಗೆ ಧಾರವಾಡ ಜಿಲ್ಲಾಡಳಿತ ಶನಿವಾರ ತಲಾ ಒಂದು ಲಕ್ಷ ರೂ.ನಗದು ಬಹುಮಾನ ನೀಡಿ ಗೌರವಿಸಿತು.
ನಗದು ಪುರಸ್ಕಾರದ ವಿವರ :
ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಹೆಸರಿನಲ್ಲಿ ಈ ಪುರಸ್ಕಾರ ನೀಡಲಾಗುತ್ತಿದೆ.
74ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಜಿ.ವಿ.ಜೋಷಿ ರೋಟರಿ ಶಾಲೆಯ ಪ್ರಿಯಾ ಪಿ.ಹಂಚಿನಮನಿ ಹಾಗೂ ಧಾರವಾಡ ಕೆ.ಇ.ಬೋರ್ಡ್ ಶಾಲೆಯ ಅವಿನಾಶ ವಿ.ಜವಳಗೇರಿ ಅವರಿಗೆ ಈ ತಲಾ ಒಂದು ಲಕ್ಷ ರೂ.ನಗದು ಪುರಸ್ಕಾರಕ್ಕೆ ಆಯ್ಕೆಯಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳು.
ಅವರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಸತ್ಕರಿಸಿ ಅಭಿನಂದಿಸಿದರು.