ಧಾರವಾಡ prajakiran.com : ಆಸ್ತಿ ವಿವಾದ ವಿಚಾರ ಹಿನ್ನಲೆಯಲ್ಲಿ ಒಬ್ಬನ ಕೊಲೆನಡೆದಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ಈ ಘಟನೆ ನಡೆದಿದ್ದು, ಇದರಿಂದಾಗಿ ಅಮ್ಮಿನಬಾವಿ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಶಿವಪ್ಪ ಕೊಡಬಳಗಿ (38) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಜಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬದ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ನಿನ್ನೇ ರಾತ್ರಿ ಈ ಗಲಾಟೆ ವಿಕೋಪಕ್ಕ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಧಾರವಾಡ ಗ್ರಾಮೀಣ ಪೊಲೀಸರು ಪ್ರಜಾಕಿರಣ.ಕಾಮ್ ಗೆ ಖಚಿತಪಡಿಸಿದ್ದಾರೆ.
ಇದರಿಂದಾಗಿ ಇನ್ನುಳಿದ ಐವರಿಗೆ ಗಂಭೀರ ಗಾಯಗಳಾಗಿದ್ದು, ಐವರು ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ .