ರಾಜ್ಯ

ಮಹಾರಾಷ್ಟ್ರಕ್ಕೆ ಜಿಂದಾಲ್ ಆಕ್ಸಿಜನ್ ಪೂರೈಕೆ….!

 ಎಂ.ಬಿ.ಪಾಟೀಲ್ ಅಸಮಾಧಾನ

ವಿಜಯಪುರ Prajakiran.com : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗಿದೆ.

ಜನ ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಜಿಂದಾಲ್ ಸಂಸ್ಥೆ ಉತ್ಪಾದಿಸುವ ಅರ್ಧ ಆಕ್ಸಿಜನ್ ಮಹಾರಾಷ್ಟ್ರ ರಾಜ್ಯಕ್ಕೆ ಕಳುಹಿಸಲಾಗುತ್ತಿದೆ.

ರಾಜ್ಯದಲ್ಲೇ ಕೊರತೆ ಇದ್ದಾಗ ಬೆರೆಯವರಿಗೆ ಕಳಿಸುವ ಸರ್ಕಾರದ ನಿರ್ಧಾರ ಸರಿಯಲ್ಲ.

ಕೂಡಲೇ ಈ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಡಾ.ಎಂ.ಬಿ. ಪಾಟೀಲ ಹೇಳಿದರು‌

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯಕ್ಕೆ ಆಕ್ಸಿಜನ್ ನೆರವು ನೀಡುವುದಕ್ಕೆ ನನ್ನ ಯಾವುದೇ ವಿರೋಧವಿಲ್ಲ.

ಆದರೆ ನಮ್ಮ ರಾಜ್ಯದಲ್ಲಿಯೇ ಆಕ್ಸಿಜನ್ ಉತ್ಪಾದನೆ ಆದರೂ ನಮಗೆ ಅದರ ಕೊರತೆ ಇದೆ.

ರಾಜ್ಯದಲ್ಲಿ ಆಕ್ಸಿಜನ್ ಸರಿದೂಗಿದ ಬಳಿಕ ಬೆರೆಯವರ ನೆರವಿಗೆ ನಿಲ್ಲಬೇಕು ಎಂದರು.

ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಕಾರಣ ನನ್ನ ಅಧಕ್ಷತೆಯಲ್ಲಿನ ಬಿಎಲ್ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡನಲ್ಲಿ 250 ಹಾಸಿಗೆ ಹೆಚ್ಚಿಸಲಾಗಿದೆ.

ಮತ್ತೊಂದೆಡೆ ಸರ್ಕಾರ ನಿಗದಿ ಮಾಡಿದ ದರದಲ್ಲೇ ರಿಯಾಯಿತಿ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *