ಧಾರವಾಡ prajakiran.com : ಪೇಟಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಮದಿಹಾಳದ ಲಾಸ್ಟ್ ಬಸ್ ನಿಲ್ದಾಣದ ಬಳಿ ಇರುವ ಅಶೋಕ್ ಬಾಬರ್ ಅವರ ಮನೆಯ ಮುಂದೆ ಪೇಟಿಂಗ್ ಮಾಡುವಾಗ ಮನೆ ಮುಂದೆ ಹಾದು ಹೋಗಿದ್ದ ತ್ರೀಫೇಸ್ ವಿದ್ಯುತ್ ತಂತಿ ತಗುಲಿ ಕೆಳಗೆ ಬಿದ್ದು, ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು.
ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಆತನ ಪತ್ನಿ ಕವಿತಾ ಮಲ್ಲಪ್ಪ ಹುಡೇದ ಧಾರವಾಡ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಹಟ್ಟಿ ಗ್ರಾಮದ ಹಳ್ಳದ ಓಣಿ ನಿವಾಸಿ ಮಲ್ಲಪ್ಪ ಬಸಪ್ಪ ಹುಡೇದ (38) ಎಂಬಾತನೇ ಸಾವನ್ನಪ್ಪಿದ್ದ ದುರ್ದೈವಿಯಾಗಿದ್ದು, ಸ್ಥಳೀಯರು ಹೆಸ್ಕಾಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.