ಚೆನ್ನೈ Prajakiran.com : ಇಲ್ಲಿನ ಕಾರ್ಖಾನೆಯೊಂದರಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಚೆನ್ನೈನ ವಿರುಧುನಗರ್ ಜಿಲ್ಲೆಯ ಶಿವಕಾಶಿ ಸಮೀಪದ ಥಾಯಿಲ್ ಪಟ್ಟಿಯ ಕಾರ್ಖಾನೆಯೊಂದರಲ್ಲಿ ಅಕ್ರಮವಾಗ ಪಟಾಕಿ ತಯಾರಿಸುತ್ತಿದ್ದ ಸಮಯದಲ್ಲಿ ಸ್ಪೋಟ ಸಂಭವಿಸಿದೆ.
ಮಗು ಸೇರಿದಂತೆ ಮೂರು ಜನ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.