ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಪವನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥ ಶಂಕರ ಪಾಟೀಲ ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಂಗಳೂರಿನಲ್ಲಿ ವಿಧಿವಶರಾದರು.
ಅವರು ಕಳೆದ ಕೆಲ ದಿನಗಳಿಂದಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ತಾಯಿನಿಧನದ ಬೆನ್ನಲ್ಲೇ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಎರ್ ಲಿಫ್ಟ್ ಮೂಲಕ ಬೆಂಗಳೂರಿನ ಖಾಸಗಿ ಹಾಗೂ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದರು.
ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿಯೇ ನಿಧನಹೊಂದಿದರು. ಕಳೆದ ಕೆಲವು ವರ್ಷಗಳಿಂದ ಧಾರವಾಡದಲ್ಲಿ ಪವನ ಆಂಗ್ಲ ಮಾಧ್ಯಮ ಶಾಲೆಯ ಮೂಲಕ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು.
ಅವರಅಗಲಿಕೆಗೆ ಧಾರವಾಡದಅನೇಕರ ಗಣ್ಯರು, ವರ್ತಕರು, ಉದ್ಯಮಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಂಬನಿ ಮಿಡಿದಿದ್ದಾರೆ.