ಜಿಲ್ಲೆ

ಧಾರವಾಡದ ಪವನ ಶಾಲೆ ಮುಖ್ಯಸ್ಥ ಶಂಕರ ಪಾಟೀಲ ಇನ್ನಿಲ್ಲ

ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಪವನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥ ಶಂಕರ ಪಾಟೀಲ ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಂಗಳೂರಿನಲ್ಲಿ ವಿಧಿವಶರಾದರು.

ಅವರು ಕಳೆದ ಕೆಲ ದಿನಗಳಿಂದಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ತಾಯಿನಿಧನದ  ಬೆನ್ನಲ್ಲೇ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಎರ್ ಲಿಫ್ಟ್ ಮೂಲಕ ಬೆಂಗಳೂರಿನ ಖಾಸಗಿ ಹಾಗೂ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿಯೇ ನಿಧನಹೊಂದಿದರು. ಕಳೆದ ಕೆಲವು ವರ್ಷಗಳಿಂದ ಧಾರವಾಡದಲ್ಲಿ ಪವನ ಆಂಗ್ಲ ಮಾಧ್ಯಮ ಶಾಲೆಯ ಮೂಲಕ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು.

ಅವರಅಗಲಿಕೆಗೆ ಧಾರವಾಡದಅನೇಕರ ಗಣ್ಯರು, ವರ್ತಕರು, ಉದ್ಯಮಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *