ಜಿಲ್ಲೆ

ಚುನಾವಣಾ ನೀತಿ ಸಂಹಿತೆ : ಕಾರ್ಯಕ್ರಮ ನಡೆಸುವ ಮುಂಚಿತವಾಗಿ ಅನುಮತಿ ಪಡೆಯಬೇಕು : ಭರತ

ಧಾರವಾಡ ಪ್ರಜಾಕಿರಣ.ಕಾಮ್ ಮಾ.30 : ಕರ್ನಾಟಕ ವಿಧಾನಸಭಾ ಚುನಾವಣೆಯ ನಿಮಿತ್ತ ಮಾರ್ಚ್ 29 ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕರು ಸಭೆ, ಸಮಾರಂಭ, ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮುಂಚಿತವಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ 74 ಪಶ್ಚಿಮ ಮತಕ್ಷೇತ್ರದ ಚುನಾವಣಾಧಿಕಾರಿ ಭರತ್ ಎಸ್. ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೆಲವು ಸಂದರ್ಭಗಳಲ್ಲಿ ಹುಬ್ಬಳ್ಳಿ ಧಾರವಾಡ (ಪಶ್ಚಿಮ) ವಿಧಾನ ಸಭಾ ಮತಕ್ಷೇತ್ರ-74ರ ಭಾಗದ ಸಾರ್ವಜನಿಕರು ಕಾರ್ಯಕ್ರಮದ ಕೆಲವು ಗಂಟೆಗಳ ಮುಂಚೆ ಮಾತ್ರ ಅನುಮತಿಗಾಗಿ ಪತ್ರಗಳನ್ನು ನೀಡುತ್ತಿರುವುದು ಕಂಡು ಬಂದಿರುತ್ತದೆ.

ಆದ್ದರಿಂದ ಈ ಮೂಲಕ ಹುಬ್ಬಳ್ಳಿ ಧಾರವಾಡ (ಪಶ್ಚಿಮ) ವಿಧಾನ ಸಭಾ ಮತಕ್ಷೇತ್ರ-74ರ ಭಾಗದ ಎಲ್ಲ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ, ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮುಂಚೆ ಅಂದರೆ ಕನಿಷ್ಟ 48 ತಾಸುಗಳ ಮುಂಚಿತವಾಗಿ ಅನುಮತಿ ಕೋರಿ ಚುನಾವಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬೇಕೆಂದು 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಭರತ್ .ಎಸ್.  ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *