ಧಾರವಾಡ ಪ್ರಜಾಕಿರಣ.ಕಾಮ್ ಮಾ.30 : ಕರ್ನಾಟಕ ವಿಧಾನಸಭಾ ಚುನಾವಣೆಯ ನಿಮಿತ್ತ ಮಾರ್ಚ್ 29 ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕರು ಸಭೆ, ಸಮಾರಂಭ, ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮುಂಚಿತವಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ 74 ಪಶ್ಚಿಮ ಮತಕ್ಷೇತ್ರದ ಚುನಾವಣಾಧಿಕಾರಿ ಭರತ್ ಎಸ್. ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೆಲವು ಸಂದರ್ಭಗಳಲ್ಲಿ ಹುಬ್ಬಳ್ಳಿ ಧಾರವಾಡ (ಪಶ್ಚಿಮ) ವಿಧಾನ ಸಭಾ ಮತಕ್ಷೇತ್ರ-74ರ ಭಾಗದ ಸಾರ್ವಜನಿಕರು ಕಾರ್ಯಕ್ರಮದ ಕೆಲವು ಗಂಟೆಗಳ ಮುಂಚೆ ಮಾತ್ರ ಅನುಮತಿಗಾಗಿ ಪತ್ರಗಳನ್ನು ನೀಡುತ್ತಿರುವುದು ಕಂಡು ಬಂದಿರುತ್ತದೆ.
ಆದ್ದರಿಂದ ಈ ಮೂಲಕ ಹುಬ್ಬಳ್ಳಿ ಧಾರವಾಡ (ಪಶ್ಚಿಮ) ವಿಧಾನ ಸಭಾ ಮತಕ್ಷೇತ್ರ-74ರ ಭಾಗದ ಎಲ್ಲ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ, ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮುಂಚೆ ಅಂದರೆ ಕನಿಷ್ಟ 48 ತಾಸುಗಳ ಮುಂಚಿತವಾಗಿ ಅನುಮತಿ ಕೋರಿ ಚುನಾವಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬೇಕೆಂದು 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಭರತ್ .ಎಸ್. ತಿಳಿಸಿದ್ದಾರೆ