ಬೆಂಗಳೂರು Prajakiran.com : ಬಾರಿ ಕೋಲಾಹಲ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಸಂತ್ರಸ್ತ ಯುವತಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸಿ.ಆರ್.ಪಿ.ಸಿ 164 ರಡಿ ದಾಖಲಿಸಿದ ಯುವತಿಯ ಹೇಳಿಕೆ ನಿಯಮ ಬಾಹಿರವಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಯುವತಿ ತಂದೆ ಅರ್ಜಿ ಸಲ್ಲಿಸಿದ್ದರು.
ಯುವತಿ ಈಗಾಗಲೇ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾಳೆ. ಹಾಗಾಗಿ ಯುವತಿ ತಂದೆ ಸಿ.ಆರ್.ಪಿ.ಸಿ 164 ಹೇಳಿಕೆ ಪ್ರಶ್ನಿಸುವಂತಿಲ್ಲ ಎಂದು ಯುವತಿ ಪರ ವಕೀಲರು ವಾದ ಮಂಡಿಸಿದ್ದರು.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಯವತಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.