ರಾಜ್ಯ

ಪಿ.ಎಫ್.ಐ ನಿಷೇಧ : ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ

ಬೆಂಗಳೂರು prajakiran. com ಸೆ. 28: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ.ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ.

ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ.

ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗ ಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ.

ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು.

ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *